Answer :

Answer:

ಎರಡು ಅಥವಾ ಅನೇಕ ನಾಮಪದಗಳು ಸೇರಿ ಸಮಸ್ತ ಪದವಾದಾಗ ಬೇರೊಂದು ಪದದ (ಅನ್ಯ ಪದದ) ಅರ್ಥವು ಪ್ರಧಾನವಾಗಿ ಉಳ್ಳ ಸಮಾಸಕ್ಕೆ ಬಹುವ್ರೀಹಿ ಎಂಬ ಹೆಸರು.

ಹಣೆಗಣ್ಣ , ಮುಕ್ಕಣ್ಣ , ನಿಡುಮೂಗ - ಈ ಪದಗಳನ್ನು ಬಿಡಿಸಿ ಬರೆದರೆ ,

ಹಣೆಯಲ್ಲಿ + ಕಣ್ಣು ಉಳ್ಳವನು ಯಾರೋ ಅವನು - ಹಣೆಗಣ್ಣ (ಶಿವ)

ಮೂರು + ಕಣ್ಣು ಉಳ್ಳವನು ಯಾರೋ ಅವನು - ಮುಕ್ಕಣ್ಣ (ಶಿವ)

ನಿಡಿದು + ಮೂಗನ್ನು ಉಳ್ಳವನು ಯಾರೋ ಅವನು - ನಿಡುಮೂಗ

ಹಣೆಯಲ್ಲಿ + ಕಣ್ಣು ಉಳ್ಳವ - ಈ ಎರಡೂ ಪದಗಳ ಅರ್ಥ ಇಲ್ಲಿ ಮುಖ್ಯವಲ್ಲ . ಈ ಎರಡೂ ಪದಗಳ ಅರ್ಥದಿಂದ ಹೊಳೆಯುವ ಅನ್ಯ ಪದ ಶಿವ ಮುಖ್ಯ. ಇಲ್ಲಿ ಮೂರನೆಯ (ಅನ್ಯ ಪದ) ಪದದ ಅರ್ಥವೇ ಪ್ರಮುಖವಾಗಿ ಗೋಚರಿಸುತ್ತದೆ.

ಮೂರು ಕಣ್ಣು ಉಳ್ಳವ - ಅಂದರೆ ಶಿವ ಎಂಬ ಅರ್ಥ ಮುಖ್ಯ.. ಶಿವನಿಗೆ ಮೂರನೆಯ - ಜ್ಞಾನ ಚಕ್ಷು ಇರುವುದೆಂಬುದು ಎಲ್ಲರಿಗೂ ತಿಳಿದಿರುವ ವಿಷಯ. ಅನ್ತೆಯೇ ಹಣೆಗಣ್ಣ ಎಂಬ ಪದ.

ಹೀಗೆ ಸಮಾಸದಲ್ಲಿರುವ ಪದಗಳ ಅರ್ಥಕ್ಕೆ ಪ್ರಾಧಾನ್ಯತೆಯೇ ಇಲ್ಲದೆ ಅನ್ಯವಾದ ಬೇರೊಂದು ಪದವು ಇಲ್ಲಿ ಪ್ರಧಾನವಾಗಿ ಬರುತ್ತದೆ.

Explanation:

ದಯವಿಟ್ಟು ನನ್ನನ್ನು ಬುದ್ದಿವಂತ ಎಂದು ಗುರುತಿಸಿ.

Answer:

sorry can you tell in English

Other Questions